ಯಡಿಯೂರಪ್ಪನವರು ಬೆಂಗಳೂರಲ್ಲಿ ಪ್ರತಿಭಟನೆ ಮಾಡುತ್ತಾ ಕರ್ನಾಟಕ ಸರ್ಕಾರದ ವಿರುದ್ದ ಟೀಕೆಗಳನ್ನು ಮಾಡುವ ಬದಲು ದೆಹಲಿಗೆ ಹೋಗಿ ಕೇಂದ್ರ ಸರಕಾರಕ್ಕೆ ರಾಜ್ಯದ ಸ್ಥಿತಿ ಮನವರಿಕೆ ಮಾಡುವ ಪ್ರಯತ್ನ ಯಾಕೆ ಮಾಡಬಾರದು ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು. ಬಿಜೆಪಿಯ 26 ಸಂಸದರಿದ್ದಾರಲ್ಲ? ಅವರೆಲ್ಲ ಏನು ಮಾಡುತ್ತಿದ್ದಾರೆ? ಅವರು ಮೌನ ವಹಿಸುರುವುದಕ್ಕೆ ಏನು ಕಾರಣ ಎಂದು ಸಚಿವ ಕೇಳಿದರು.