ತಿರುಮಲ ತಿರುಪತಿ ದೇವಸ್ಥಾನವು ರಾಮ ಕೋಟಿಯ ಮಾದರಿಯಲ್ಲಿ 'ಗೋವಿಂದ ಕೋಟಿ' ಎಂಬ (Govinda Namavali) ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಟಿಟಿಡಿ ಛೇರ್ಮನ್ ಭೂಮನ ಕರುಣಾಕರ ರೆಡ್ಡಿ ಮಾತನಾಡಿ, ಇಂದಿನ ಯುವಜನರಲ್ಲಿ ಭಕ್ತಿ ಭಾವವನ್ನು (Spiritual) ಹೆಚ್ಚಿಸಲು ಹಾಗೂ ಸನಾತನ ಧರ್ಮದ ಬಗ್ಗೆ ವ್ಯಾಪಕ ಪ್ರಚಾರ ಮಾಡಲು ಈ ಕಾರ್ಯಕ್ರಮ ಉಪಯುಕ್ತವಾಗಲಿದೆ. ಅಷ್ಟೇ ಅಲ್ಲ, ‘ಗೋವಿಂದ ಕೋಟಿ’ ಬರೆದ ಮಕ್ಕಳು, ಯುವಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ತಿರುಮಲ ಬೆಟ್ಟದಲ್ಲಿ ಒಮ್ಮೆ ಶ್ರೀವಾರು ತಿಮ್ಮಪ್ಪನ (Lord venkateswara) ವಿಐಪಿ ಬ್ರೇಕ್ ದರ್ಶನ ನೀಡುವುದಾಗಿ ಘೋಷಿಸಿದ್ದಾರೆ.