ಸಾಯಂಕಾಲ 7 ಗಂಟೆಗೆ ನವದೆಹಲಿಗೆ ತೆರಳುವ ಮೊದಲು ಸ್ವಲ್ಪ ಹೊತ್ತು ವಿಶ್ರಮಿಸಿಕೊಳ್ಳುವ ಉದ್ದೇಶದಿಂದ ನಡ್ಡಾ ಅತಿಥಿ ಗೃಹಕ್ಕೆ ಆಗಮಿಸಿದ್ದರು. ನಿನ್ನೆ ರಾತ್ರಿಯೇ ನಗರಕ್ಕೆ ಆಗಮಿಸಿದ ನಡ್ಡಾ ಅವರು ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಇತರ ಕೆಲ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿದರು.