ಟಾಂಗಾ ಮೂಲಕ ಸಭೆಗೆ ಆಗಮಿಸಿದ ವಿಜಯಪುರ ಮೇಯರ್ ಮೆಹಜಬೀನ್ ಹೊರ್ತಿ, ಸರ್ಕಾರದ ವಿರುದ್ಧ ಅಸಮಾಧಾನ

ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಮೆಹಜಬೀನ್ ಹೊರ್ತಿ ಅವರು ಟಾಂಗಾ ಸವಾರಿ ಮೂಲಕ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಆಗಮಿಸಿದ್ದಾರೆ. ಹಾಗೂ ಇದೇ ವೇಳೆ ತನ್ನದೇ ಪಕ್ಷದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ನಮ್ಮದೇ ಸರ್ಕಾರವಿದ್ದರೂ ಪಾಲಿಕೆ ಮೇಯರ್ ರನ್ನು ಉದಾಸೀನ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.