ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ನಡೆಸುತ್ತಿದ್ದ ಜನತಾ ದರ್ಶನ ನಡೆಸುತ್ತಿದ್ದಾಗ ಜನ ಹೇಳಿಕೊಳ್ಳುತ್ತಿದ್ದ ಸಮಸ್ಯೆಗಳು ಈಗಲೂ ಹಾಗೆಯೇ ಇವೆ ಎಂದು ಕುಮಾರಸ್ವಾಮಿ ಹೇಳಿದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಈಗಿನ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆರಂಭಿಸಿದ್ದ ಜಿಲ್ಲಾಧಿಕಾರಿಯ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮವನ್ನು ಕುಮಾರಸ್ವಾಮಿ ಶ್ಲಾಘಿಸಿದರು.