ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶೂನ್ಯ ಸಾಧನೆಯ ಸಮಾವೇಶ ಮಾಡುತ್ತಿದ್ದಾರೆ, ಸರ್ಕಾರದ ಭಂಡತನ ಜಗಜ್ಜಾಹೀರಾಗಿದೆ, ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೋಢೀಕರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ, ಆ ವಿಚಾರ ಬೇರೆ, ಹಾಗಂತ ಗ್ಯಾರಂಟಿ ಯೋಜನೆಗಳನ್ನೇ ಅಭಿವೃದ್ಧಿ ಕೆಲಸಗಳು ಅಂತ ಬಿಂಬಿಸಲಾದೀತೆ ಎಂದು ವಿಜಯೇಂದ್ರ ಪ್ರಶ್ನಿಸಿದರು.