ನಮ್ಮ ಹುಬ್ಬಳ್ಳಿ ವರದಿಗಾರ ನೀಡುವ ಮಾಹಿತಿ ಪ್ರಕಾರ ಪ್ರಕಾಶ ಬಾರಕೇರ ಇಸ್ಕಾನ್ ನಲ್ಲಿ ಉದ್ಯೋಗಿಯಾಗಿದ್ದರು ಮತ್ತು ಅವರ ದುರಂತ ಸಾವಿನ ಹಿನ್ನೆಲೆಯಲ್ಲಿ ಸಂಸ್ಥೆಯು ಮೃತನ ಕುಟುಂಬಕ್ಕೆ ಪರಿಹಾರದ ರೂಪದಲ್ಲಿ ರೂ. 3 ಲಕ್ಷ ನೀಡಲು ಮುಂದಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಸಹ ಪ್ರಕಾಶ್ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗುವ ಭರವಸೆಯನ್ನು ನೀಡಿದ್ದಾರೆ.