ಗ್ಯಾರಂಟಿ ಯೋಜನೆಗಳಿಗೆ ₹ 58,000 ಕೋಟಿ ಹಣವನ್ನು ಬದಿಗಿರಿಸಿದ್ದರಿಂದ ರಾಜ್ಯ ಸರ್ಕಾರ ಎಲ್ಲ ಪದಾರ್ಥಗಳ ಬೆಲೆಯೇರಿಕೆ ಮಾಡುತ್ತಿದೆ ಅನ್ನೋದನ್ನು ಜಾರಕಿಹೊಳಿ ಅಲ್ಲಗಳೆದರು. ಕೇಂದ್ರ ಸರ್ಕಾರ ಸಹ ಬೆಲೆಯೇರಿಕೆ ಮಾಡುತ್ತಿದೆ, ಬೆಲೆಯೇರಿಕೆ ಯಾಕೆ ಆಗುತ್ತದೆ ಅನ್ನೋದು ಬೇರೆ ವಿಚಾರ, ಚರ್ಚೆ ನಡೆಸಿ ಬೆಲೆಗಳನ್ನು ಕಡಿಮೆ ಮಾಡಬಹುದು, ಆದರೆ ಗ್ಯಾರಂಟಿ ಯೋಜನೆಗಳೊಂದಿಗೆ ಅದನ್ನು ಥಳುಕು ಹಾಕುವುದು ಸರಿಯಲ್ಲ ಎಂದು ಸಚಿವ ಹೇಳಿದರು.