ಕೆಎಸ್ ಈಶ್ವರಪ್ಪ, ಮಾಜಿ ಶಾಸಕ

ಕಾಂತೇಶ್ ನನ್ನು ಎಂಎಲ್ ಸಿ ಮಾಡ್ತೀನಿ ಅಂತ ಈಗ ಹೇಳುತ್ತಾ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ತನಗೆ ಕೋರ್ಟ್ ಕ್ಲೀನ್ ಕೊಟ್ಟ ತಕ್ಷಣ ಪುನಃ ಮಂತ್ರಿ ಮಾಡುವುದಾಗಿ ಹೇಳಿದ್ದ ಯಡಿಯೂರಪ್ಪ ಆಗಲೂ ಮೋಸಮಾಡಿದರು, 40 ವರ್ಷಗಳ ಪಕ್ಷದ ಸಂಘಟನೆ ಮಾಡಿದ ತನ್ನಂಥವನಿಗೆ ಇಷ್ಟು ದೊಡ್ಡ ಮೋಸಗಳನ್ನು ಮಾಡಿದರೆ ಅವರನ್ನು ನಂಬೋದಾದರೂ ಹೇಗೆ ಎಂದು ಈಶ್ವರಪ್ಪ ಕೇಳಿದರು.