ಮೇ 7 ರಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿ ಶಿವಮೊಗ್ಗವೊಂದನ್ನು ಹೊರತುಪಡಿಸಿ ಉಳಿದವೆಲ್ಲ ಉತ್ತರ ಕರ್ನಾಟಕದ ಭಾಗವಾಗಿರುವುದರಿಂದ, ಪ್ರಖರ ಬಿಸಲಲ್ಲಿ ಪ್ರಚಾರಕ್ಕೆ ತೆರಳಿರುವ ನಾಯಕರು ಬಸವಳಿಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿನ್ನೆ ತಮ್ಮ ಹುಟ್ಟೂರಿನಲ್ಲಿ ಮತ ಚಲಾಯಿಸಿದ ಬಳಿಕ ವಿಜಯಪುರ, ಕಲಬುರಗಿ ಮತ್ತು ಬೀದರ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿ ಪ್ರಚಾರ ನಡೆಸಿದರು.