ಕಾಂಗ್ರೆಸ್ ಪಕ್ಷಕ್ಕೆ ಇದು ಸಂಘಟನೆಯ ವರ್ಷ: ಶಿವಕುಮಾರ್

ಕಾಂಗ್ರೆಸ್ ವಿಚಾರವಾಗಿ ಹೇಳೋದಾದರೆ, ಎಲ್ಲೆಡೆ ಪಕ್ಷದ ಸಂಘಟನೆಯ ಬಗ್ಗೆ ಮಾತುಕತೆ ನಡೆಯುತ್ತಿದೆ. ಬೆಳಗಾವಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆಯ ವರ್ಷವಾಗಿ ಘೋಷಣೆ ಮಾಡಿದ್ದಾರೆ, ಹಾಗಾಗಿ ಜಿಲ್ಲಾಧ್ಯಕ್ಷರುಗಳಿಗೆ ಶಕ್ತಿ ತುಂಬುವ ಕೆಲಸ ನಡೆಯುತ್ತಿದೆ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಎಲ್ಲ ಜಿಲ್ಲಾಧ್ಯಕ್ಷರನ್ನು ದೆಹಲಿಗೆ ಕರೆಸಿ ಸಭೆ ನಡೆಸಿದ್ದಾರೆ ಮತ್ತು ಜವಾಬ್ದಾರಿಗಳನ್ನು ತಿಳಿ ಹೇಳಿದ್ದಾರೆ ಎಂದು ಶಿವಕುಮಾರ್ ಹೇಳಿದರು.