ಐಸಿಸಿ ಟಿ20ಐ ವಿಶ್ವಕಪ್ ಟೂರ್ನಿಯ ಫೈನಲ್ ನಲ್ಲಿ ಸೂರ್ಯಕುಮಾರ್ ಯಾದವ್ ಹಿಡಿದ ಅಮೋಘ ಕ್ಯಾಚ್ ಈಗ ಮನೆ ಮಾತಾಗಿದೆ. ಅದರೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಸೂರ್ಯ ಕ್ಯಾಚ್ ಹಿಡಿಯುವಾಗ ಬೌಂಟರಿ ಗೆರೆ ಮುಟ್ಟಿದರು ಅಂತ ವಿವಾದ ಸೃಷ್ಟಿಸುತ್ತಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ಸೂರ್ಯ, ಅವರೆಲ್ಲ ಯಾಕೆ ಹಾಗೆ ಹೇಳುತ್ತಿದ್ದಾರೋ ಗೊತ್ತಿಲ್ಲ, ಆದರೆ ನಾನಂತೂ ಗೆರೆ ಮುಟ್ಟಲಿಲ್ಲ ಎಂದು ಖಡಾಖಂಡಿತವಾಗಿ ಹೇಳಿದರು.