ಈಜಿಪುರ ಮೇಲ್ಸೇತುವೆ ಕಾಮಗಾರಿ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದೆ, ಅದರ ಕಾಮಗಾರಿ ಟೆಂಡರ್ ಪಡೆದಿದ್ದ ಗುತ್ತಿಗೆದಾರ ಕೇವಲ ಶೇಕಡ 5ರಷ್ಟು ಮಾತ್ರ ಕೆಲಸ ಮಾಡಿದ್ದಾನೆ. ಅವನಿಗೆ ನೀಡಿದ ಗುತ್ತಿಗೆಯನ್ನು ರದ್ದು ಮಾಡಿ ಬೇರೆಯವರಿಗೆ ನೀಡಲು ಡಿಕೆ ಶಿವಕುಮಾರ್ ಹೇಳಿದ್ದಾರೆ ಮತ್ತು ತಾವು ಸಹ ಹೇಳಿರುವುದಾಗಿ ಸಿದ್ದರಾಮಯ್ಯ ಹೇಳಿದರು.