ಒಂದು ದೇಶ ಒಂದು ಚುನಾವಣೆ ವಿಧೇಯಕದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸಾದ್ ಅಬ್ಬಯ್ಯ, ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದದ್ದು, ಕೇಂದ್ರ ಸರ್ಕಾರ ಮಸೂದೆಯನ್ನು ಪಾಸು ಮಾಡಿಸುವ ಹಠ ತೊಟ್ಟಂತಿದೆ, ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಬೇಕಿದೆ, ಮಸೂದೆ ಜಾರಿಗೆ ಹಲವು ತಾಂತ್ರಿಕ ಸಮಸ್ಯೆಗಳಿವೆ, ಕೇಂದ್ರವು ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದರು.