ರಾಮನಗರದಲ್ಲಿ ಸಿಪಿ ಯೋಗೇಶ್ವರ್

ದೇವೇಗೌಡರು ಹುಟ್ಟುಹಾಕಿದ ಜೆಡಿಎಸ್ ಪಕ್ಷಕ್ಕೆ ನಾಯಕತ್ವ ಇಲ್ಲದಂತಾಗಿದೆ, ಗೌಡರಿಗೆ ವಯಸ್ಸಾಗಿದೆ ಮತ್ತು ಕುಮಾರಸ್ವಾಮಿ ನಾಯಕತ್ವವನ್ನು ಜನ ತಿರಸ್ಕರಿಸಿದ್ದಾರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ಗೆ 19 ಸೀಟು ಬಂದಿದ್ದು ಇದಕ್ಕೆ ಸಾಕ್ಷಿ. ಅದಕ್ಕೆ ತದ್ವಿರುದ್ಧವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ 136 ಸೀಟುಗಳನ್ನು ಗೆದ್ದರು, ವ್ಯತ್ಯಾಸ ನಿಚ್ಚಳವಾಗಿ ಗೊತ್ತಾಗುತ್ತಿದೆ ಎಂದು ಯೋಗೇಶ್ವರ್ ಹೇಳಿದರು.