ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಜೋರಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ತುಂಗಭದ್ರಾ ಡ್ಯಾನಿಂದ ನದಿಗೆ ನೀರು ಬಿಡಲಾಗುತ್ತಿದ್ದು, ಹಂಪಿಯ ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿವೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ಐತಿಹಾಸಿಕ ಸ್ಮಾರಕಗಳು ಮುಳುಗಡೆ ಸಂಬಂಧಿತ ವಿಡಿಯೋ ಇಲ್ಲಿದೆ.