ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸದ್ಯ ಐಪಿಎಲ್ ಮಹಾಸಮರ ನಡೆಯುತ್ತಿದೆ. ಪ್ಲೇಆಫ್ಗೆ ಕಾಲಿಡಲು, ಆರ್ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ರೋಚಕ ಪಂದ್ಯ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಆರ್ಸಿಬಿ-ಸಿಎಸ್ಕೆ ಪಂದ್ಯ ವಿಕ್ಷೀಸಿದ್ದು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ H.C.ಮಹದೇವಪ್ಪ, ಡಾ.ಜಿ.ಪರಮೇಶ್ವರ್, ಕೆ.ವೆಂಕಟೇಶ್ ಸಾಥ್ ನೀಡಿದ್ದಾರೆ. ಇನ್ನು ನಟ ಶಿವರಾಜ್ ಕುಮಾರ್ ಕೂಡ ಪಂದ್ಯ ವೀಕ್ಷಣೆ ಮಾಡಿದ್ದಾರೆ.