ಇದೇನು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಆಪರೇಷನ್ ಸಿಂಧೂರ್ ಬಗ್ಗೆ ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ

ಇದಕ್ಕೂ ಮೊದಲು, ಭಾರತದ ಪ್ರತಿದಾಳಿಯ ಹೆಸರಾಗಿ 'ಆಪರೇಷನ್ ಸಿಂಧೂರ್' ಅನ್ನು ಆಯ್ಕೆ ಮಾಡಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಯವರನ್ನು ಟೀಕಿಸಿದ್ದರು. ಇದೀಗ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಪರೇಷನ್ ಸಿಂಧೂರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು 'ಒಂದು ರಾಷ್ಟ್ರ, ಒಂದು ಪತಿ' ಯೋಜನೆಯೇ? ಎಂದು ಕೇಳಿದ್ದಾರೆ.