ಯಾರೇನೇ ಹೇಳಿದರೂ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ವರ್ಚಸ್ಸು ಪುನಃ ಕ್ರಮೇಣ ಹೆಚ್ಚುತ್ತಿದೆ, ವಿಧಾನಸಭಾ ಚುನಾವಣಾ ಸಮಯದಲ್ಲಿ ಅವರನ್ನು ಮೂಲೆಗುಂಪು ಮಾಡಿದ್ದ ಪಕ್ಷದ ಹಿರಿಯ ನಾಯಕರಿಗೆ ತಪ್ಪಿನ ಅರಿವಾಗಿದೆ. ಯಡಿಯೂರಪ್ಪ ಅಪೇಕ್ಷೆಯ ಮೇರೆಗೆ ಅವರ ಮಗನನ್ನೇ ಪಕ್ಷದ ರಾಜ್ಯ ಘಟಕಕ್ಕೆ ಅಧ್ಯಕ್ಷನಾಗಿ ನೇಮಕ ಮಾಡಲಾಗಿದೆ. ಪಕ್ಷದ ಕೆಲ ನಾಯಕರ ತೀವ್ರ ಸ್ವರೂಪದ ವಿರೋಧವನ್ನು ಯಡಿಯೂರಪ್ಪ ಕಡೆಗಣಿಸುತ್ತಿದ್ದಾರೆ.