ಅದು ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಕುಡಿಯುವ ನೀರನ್ನ ಪೂರೈಸುವ ಪ್ರಮುಖ ಜಲಾಶಯ. ಆದರೆ ಅದರಲ್ಲಿನ ನೀರಿನ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿತ್ತು. ಡ್ಯಾಂ ನಲ್ಲಿದ್ದ ನೀರು ಸಹಾ ಕುಡಿಯಲು ಸಾಕಾಗುತ್ತೊ ಇಲ್ಲವೋ ಎಂಬ ಭಯವೂ ಇತ್ತು. ಆ ಸಂದರ್ಭದಲ್ಲಿ ಮಳೆಯಾಗದಿದ್ದರೆ ಮುಂದೆ ಏನು ಅನ್ನೋ ಆತಂಕದಲ್ಲಿರುವಾಗಲೇ, ವರುಣದೇವ ಕರುಣೆ ತೋರಿದ ಪರಿಣಾಮ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು, ಕೆಲವೇ ಕೆಲವು ದಿನಗಳ ಹಿಂದೆ ಖಾಲಿ ಖಾಲಿಯಾಗಿದ್ದ ಡ್ಯಾಂ ಈಗ ನಿಧಾನವಾಗಿ ಮೈದುಂಬಿಕೊಳ್ಳಲಾರಂಭಿಸಿದೆ.