ಆದರೆ, ದಲಿತ ನಾಯಕರೊಬ್ಬರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಕೂಗು ಕೇಳಿ ಬಂದ ಕಾರಣ ಮಲ್ಲಿಕಾರ್ಜುನ ಖರ್ಗೆ ಮತ್ತು ಪರಮೇಶ್ವರ ಹೆಸರುಗಳು ಆ ಉನ್ನತ ಸ್ಥಾನಕ್ಕಾಗಿ ಮುಂಚೂಣಿಯಲ್ಲಿದ್ದವು. ಆದರೆ ಸಿದ್ದರಾಮಯ್ಯ ಅದ್ಹ್ಯಾಗೋ ಹೈ ಕಮಾಂಡ್ ಮನವೊಲಿಸಿ ಸಿಎಂ ಕುರ್ಚಿಯಲ್ಲಿ ಕುಳಿತುಬಿಟ್ಟರು! ಭ್ರಮನಿರಸನಗೊಂಡಿದ್ದ ಪರಮೇಶ್ವರ್ ಸಾರ್ವಜನಿಕವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು