ಗರುಢಾರೂಢ ಚಲುವನಾರಾಯಣಸ್ವಾಮಿ ಇಂದು ಭಕ್ತರಿಗೆ ದರ್ಶನ ನೀಡಲಿದ್ದು ಸುಮಾರು ಒಂದೂವರೆ ಲಕ್ಷ ಜನ ಭಕ್ತಾದಿಗಳು ಬ್ರಹ್ಮೋತ್ಸವದಲ್ಲಿ ಭಾಗಿಯಾಗಲಿರುವರೆಂದು ಮಂಡ್ಯ ಜಿಲ್ಲಾಧಿಕಾರಿ ಹೇಳುತ್ತಾರೆ. ಮೊದಲ ಬಾರಿಗೆ ಭಕ್ತಾದಿಗಳಿಗೆಂದು ದಾಸೋಹ ವ್ಯವಸ್ಥೆಯನ್ನು ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 7 ಗಂಟೆಯವರಗೆ ಮಾಡಲಾಗಿದೆ, ಯಾವುದೇ ಅಹಿತಕರ ಘಟನೆ ಜರುಗದಂತೆ ಸುಮಾರು 1,200ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಅವರು ಹೇಳಿದರು.