ಮಗ ಜೈಲು ಸೇರಿದ ಎರಡೂವರೆ ತಿಂಗಳ ಅವಧಿಯಲ್ಲಿ ಶ್ರೀನಿವಾಸಯ್ಯ ಮತ್ತು ಅವರ ಪತ್ನಿ ಕೇವಲ ಮೂರು ಬಾರಿ ಮಾತ್ರ ನೋಡಲು ಹೋಗಿದ್ದಾರೆ. ಹೋದಾಗೆಲ್ಲ ಮಗನಿಗಾಗಿ ಅವರು ಹಣ್ಣು ತೆಗೆದುಕೊಂಡು ಹೋಗಿರುವರಾದರೂ ಅದನ್ನು ಅವನೇ ತಿಂದನೋ ಬೇರೆಯವರ ಪಾಲಾಯಿತೋ ಅಂತ ಆಳವಾದ ನೋವಿನೊಂದಿಗೆ ಹೇಳುತ್ತಾರೆ.