ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಪರಮೇಶ್ವರ್ ಕ್ಯಾಂಟೀನಲ್ಲಿ ಬೋಂಡ ಮತ್ತು ಟೀ ಸವಿದ ಬಳಿಕ ನಗರದ ಆಟೋರಿಕ್ಷಾ ಚಾಲಕರ ಜೊತೆ ಮಾತುಕತೆ ನಡೆಸಿದರು. ಆಟೋಚಾಲಕರ ಮೇಲೆ ಸುಖಾಸುಮ್ಮನೆ ದಂಡ ವಿಧಿಸಬಾರದು ಅಂತ ಪೊಲೀಸರಿಗೆ ಸೂಚನೆ ನೀಡಿದ ಪರಮೇಶ್ವರ್ ಬಸ್ ನಿಲ್ದಾಣ ಬಳಿಯ ಆಟೋ ಸ್ಟ್ಯಾಂಡ್ ಅನ್ನು ವಿಸ್ತರಿಸುವ ಬಗ್ಗೆ ಯೋಚಿಸುವುದಾಗಿ ಹೇಳಿದರು.