ಬಜೆಟ್​ ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿಕೊಂಡು ಬಂದ ಬಿಜೆಪಿ ನಾಯಕರು

ಕರ್ನಾಟಕ ಬಜೆಟ್​ ಅಧಿವೇಶನ 2024 ಆರಂಭವಾಗಿದೆ. ಹತ್ತು ದಿನಗಳ ಕಾಲ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16 ರಂದು ಬಜೆಟ್​ ಮಂಡನೆ ಮಾಡಲಿದ್ದಾರೆ. ಅಧಿವೇಶನ ಇಂದು (ಫೆ.12) ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ಬಜೆಟ್​ ಅಧಿವೇಶನದ ಮೊದಲ ದಿನ ಬಿಜೆಪಿ ನಾಯಕರು ಕೇಸರಿ ಶಾಲೆ ಧರಿಸಿಕೊಂಡು ಬಂದಿದ್ದು ವಿಶೇಷವಾಗಿದೆ.