ರಾಜ್ಯದ ಸಿದ್ದರಾಮಯ್ಯ ಸರ್ಕಾರ ಅಧಿಕಾರಿಗಳನ್ನು ತನ್ನ ಸ್ವಂತ ಸೊತ್ತು ಅಂತ ಭಾವಿಸಿದೆ, ಅಧಿಕಾರಿಗಳನ್ನು ರಾಜಕಾರಣದ ವ್ಯಾಪ್ತಿಗೆ ತಂದು ಅವರ ಮನಸ್ಸಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಿಷಬೀಜವನ್ನು ಬಿತ್ತುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ ಎಂದು ಶೋಭಾ ಕರಂದ್ಲಾಜೆ ಹೇಳಿದರು. ಕೆಟ್ಟ ರಾಜಕಾರಣವನ್ನು ಬಿಟ್ಟು ಕೇಂದ್ರದೊಂದಿಗೆ ಕೈ ಜೋಡಿಸುವ ಕೆಲಸ ಸಿದ್ದರಾಮಯ್ಯ ಮಾಡಬೇಕು ಎಂದು ಅವರು ಹೇಳಿದರು.