ಐತಿಹಾಸಿಕ ‘ಶ್ರೀರಂಗಪಟ್ಟಣ ದಸರಾ ಮಹೋತ್ಸವ’ ನಡೆಯುತ್ತಿದೆ. ಶ್ರೀರಂಗಪಟ್ಟಣದ ರಂಗನಾಥ ಮೈದಾನದಲ್ಲಿ ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಈ ಸಮಾರಂಭಕ್ಕೆ ಶಿವರಾಜ್ಕುಮಾರ್ ಅವರು ಆಗಮಿಸಿದ್ದಾರೆ. ಕಾರ್ಯಕ್ರಮದ ವೇದಿಕೆಗೆ ಶಿವಣ್ಣ ಎಂಟ್ರಿ ನೀಡಿದಾಗ ಅಭಿಮಾನಿಗಳು ಜೈಕಾರ ಕೂಗಿದರು. ಈ ವೇಳೆ ಅವರಿಗೆ ಸನ್ಮಾನ ಮಾಡಲಾಯಿತು.