‘ಗೌರವ ಇಲ್ಲದ ಕಡೆ ಇರಲ್ಲ’; ಗಟ್ಟಿ ನಿರ್ಧಾರ ಮಾಡಿದ ಜೆಕೆ

ನಟ ಜೆಕೆ ಅವರು ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಫೇಮಸ್ ಆದವರು. ಅವರು ಸಾಕಷ್ಟು ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ಅವರ ನಟನೆಯ ‘ಆ ಕರಾಳ ರಾತ್ರಿ’ ಸಿನಿಮಾ ವಿಮರ್ಶೆಯಲ್ಲಿ ಗೆದ್ದಿತು. ಈಗ ಅವರು ಸಿನಿಮಾ ಇಂಡಸ್ಟ್ರಿ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ‘ಗೌರವ ಇಲ್ಲದ ಕಡೆ ನಾನು ಇರಲ್ಲ. ಜನರಿಂದ ಸಾಕಷ್ಟು ಪ್ರೀತಿ ಸಿಕ್ಕಿದೆ. ಚೆನ್ನಾಗಿದ್ದಾಗಲೇ ಸಿನಿಮಾ ಇಂಡಸ್ಟ್ರಿ ಬಿಡ್ತಾ ಇದೀನಿ’ ಎಂದಿದ್ದಾರೆ ಜೆಕೆ. ಅವರು ಹೇಳಿರುವ ಪೂರ್ತಿ ವಿಚಾರ ವಿಡಿಯೋದಲ್ಲಿದೆ.