ಕಾಂಗ್ರೆಸ್ ಪಕ್ಷ ಮೊನ್ನೆಯಷ್ಟೇ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷತೆ ವಹಿಸಿಕೊಂಡ ಶತಮಾನೋತ್ಸವವನ್ನು ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಅಂತ ಅಚರಿಸಿತು, ಗಾಂಧಿ ಸ್ಮರಣೆ ಮಾಡಿದ ಕಾಂಗ್ರೆಸ್ ನಾಯಕರಲ್ಲಿ ಆ ಮಹಾನುಭಾವನ ಬಗ್ಗೆ ಗೌರವ, ಆದರ, ಪೂಜ್ಯಭಾವನೆ ಇದ್ದಿದ್ದರೆ ಮಲ್ಲಿಕಾರ್ಜುನ ಖರ್ಗೆ ಅಂಥ ಪದಗಳನ್ನು ಬಳಸುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.