ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ಗಳನ್ನು ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ, ದಲಿತ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಸಿಕ್ಕಿಲ್ಲಾಂತ ಆ ಸಮುದಾಯದ ಮಿನಿಸ್ಟ್ರುಗಳು ತಮ್ಮ ಮನೆಗಳಲ್ಲಿ ಡಿನ್ನರ್ ಏರ್ಪಡಿಸಿ ಚರ್ಚೆ ಮಾಡುತ್ತಾರಂತೆ, ಅದನ್ನೆಲ್ಲ ಚರ್ಚಿಸಲು ಮಂತ್ರಿಯ ಮನೇಲಿ ಯಾಕೆ ಸೇರಬೇಕು? ಅದಕ್ಕಾಗಿ ಕ್ಯಾಬಿನೆಟ್ ಸಭೆ ಇಲ್ಲವೇ? ಎಂದು ಪ್ರಶ್ನಿಸಿದರು.