ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ ಸಿಬ್ಬಂದಿ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕರ್ತವ್ಯದಲ್ಲಿ ಇದ್ದ 35 ವರ್ಷದ ಚಂದನಸಿಂಗ್ ಎಂಬ ಕಾರ್ಮಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಕಂಪನಿ ಸಿಬ್ಬಂದಿ ಅಮಾನವೀಯವಾಗಿ ಎಳೆದೊಯ್ದ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯಿಂದ ಕಂಪನಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.