ವಿಜಯಪುರದಲ್ಲಿ ಇಂದು ಅಯೋಧ್ಯೆಯ ರಾಮ ಮಂದಿರದಿಂದ ಬಂದ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಮೆರವಣಿಗೆಯಲ್ಲಿ ಪಂಡರಪೂರ ವಿಠಲನ ಸಾಂಪ್ರದಾಯಿಕ ವಾರಕರಿ ನೃತ್ಯ ಮಾಡಿದ್ದಾರೆ. ಸದ್ಯ ಶಾಸಕ ಯತ್ನಾಳ್ ಡ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.