ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಪರಾಧಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು. ಮಹಿಳೆಯರ ಮೇಲೆ ದೌರ್ಜನ್ಯದ ಪ್ರಕರಣಗಳು ಪದೇಪದೆ ನಡೆಯುತ್ತಿವೆ, ಗೂಂಡಾ ಮತ್ತು ರೌಡಿಶೀಟರ್ ಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.