ಬರದ ಸ್ಥಿತಿಯಿಂದ ಕಂಗೆಟ್ಟು ಹೊಟ್ಟೆಪಾಡಿಗಾಗಿ ಕೆಲಸಗಳನ್ನು ಅರಸುತ್ತಾ ಪಟ್ಟಣ ಪ್ರದೇಶಗಳಿಗೆ ಗುಳೆ ಎದ್ದು ಹೋಗುತ್ತಿರುವ ಜನರನ್ನು ತಡೆಗಟ್ಟಲು ಉದ್ಯೋಗ ಖಾತ್ರಿ ಯೋಜನೆಯನ್ನು 150 ದಿನಗಳಿಗೆ ಹೆಚ್ಚಿಸುವ ತುರ್ತು ಅವಶ್ಯಕತೆಯಿದೆ, ಬಿಜೆಪಿ ಶಾಸಕರಿಗೆ ಜನರ ಬಗ್ಗೆ ಕಾಳಜಿಯಿದ್ದರೆ, ಕೇಂದ್ರ ಸರ್ಕಾರ ಮೇಲೆ ಒತ್ತಡ ಹೇರಿ ಉದ್ಯೋಗ ಖಾತ್ರಿಯ ಯೋಜನೆ ದಿನಗಳನ್ನು 150 ಹೆಚ್ಚಿಸುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.