ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದೆ. ತಲಾ ರೂ. 2,000 ಯಂತೆ ರೈತರ ಬ್ಯಾಂಕ್ ಖಾತೆಗಳಿಗೆ ಈಗಾಗಲೇ ಹಣ ವರ್ಗಾಯಿಸಲಾಗಿದೆ. ಕುಡಿಯುವ ನೀರು ಮತ್ತು ಇತರ ಸೌಲಭ್ಯಗಳ ಏರ್ಪಾಟಿಗೆ ರೂ. 545 ಕೋಟಿ ಹಣವನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ಕಳಿಸಲಾಗಿದೆ. ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು.