ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಮೋದಿಯವರ ಇಂದಿನ ಹೇಳಿಕೆ ಆಘಾತಕಾರಿ ಮತ್ತು ದುಃಖಕರ ಎಂದು ಹೇಳಿದ್ದಾರೆ. ನಿಮಗೆ ಧೈರ್ಯವಿದ್ದರೆ ನಾಳೆಯೇ ಚುನಾವಣೆ ಘೋಷಿಸಿ ಎಂದು ಮಮತಾ ಬ್ಯಾನರ್ಜಿ ಮೋದಿ ಹಾಗೂ ಬಿಜೆಪಿಗೆ ಸವಾಲು ಹಾಕಿದ್ದಾರೆ.