ಇತ್ತೀಚೆಗೆಷ್ಟೇ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಗೆ ಡಿಸಿಎಂ ಡಿಕೆ ಶಿವಕುಮಾರ್ ಗಡುವು ನೀಡಿದ್ದರು. ಅದರಂತೆ ಸಾವಿರಾರು ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಬಿಬಿಎಂಪಿ ಹೇಳಿತ್ತು. ಆದರೀಗ 2-3 ದಿನ ಸುರಿದ ಮಳೆ ವಾಸ್ತವವನ್ನು ಬಯಲು ಮಾಡಿದೆ. ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಸಾಲು ಸಾಲು ರಸ್ತೆಗುಂಡಿಗಳು ಕಾಣಿಸುತ್ತಿವೆ.