ರಾಜ್ಯದ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್ ಅಂಗನವಾಡಿ ಸಕ್ಷಮ ಅಂಗನವಾಡಿಯಾಗಿ ಪರಿವರ್ತಿಸುವ ಉದ್ದೇಶ ತಮಗಿದೆ ಎಂದು ಸಚಿವೆ ಹೇಳಿದರು. ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದ ಲಕ್ಷ್ಮಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.