ನಟ ದರ್ಶನ್ & ಗ್ಯಾಂಗ್​ ಕೊಲೆ ಪ್ರಕರಣದ ಬಗ್ಗೆ ಪೂರ್ಣ ತನಿಖೆ ಆಗಿಲ್ಲ: ಜಿ.ಪರಮೇಶ್ವರ್

ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಅವಧಿ ವಿಸ್ತರಣೆ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪ್ರಕರಣದ ಬಗ್ಗೆ ಪೂರ್ಣ ತನಿಖೆ ಆಗಿಲ್ಲ.ಕೋರ್ಟ್ ಮತ್ತೆ ಕಸ್ಟಡಿಗೆ ನೀಡಿರೋದ್ರಿಂದ​ ತನಿಖೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.