ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಸಿದ್ದರಾಮಯ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ರಾಯಣ್ಣ, ಕಿತ್ತೂರು ಚೆನ್ನಮ್ಮನ ಮಾನಸ ಪುತ್ರ; ಹಾಗಾಗಿ, ರಾಜಮಾತೆಯ ಸ್ಮಾರಕ ಮತ್ತು ಕಿತ್ತೂರು ಕರ್ನಾಟಕ ಭಾಗದ ಸ್ವಾತಂತ್ರ್ಯ ಹೋರಾಟಗಾರರಾದ ಮಲ್ಲಮ್ಮ, ಅಬ್ಬಕ್ಕ ರಾಣಿ, ಬಾಳಪ್ಪ ಮೊದಲಾದವರ ಸ್ಮಾರಕಗಳ ಅಭಿವೃದ್ಧಿಗಾಗಿಯೂ ಪ್ರಾಧಿಕಾರ ರಚಿಸಬೇಕೆಂದು ಹೇಳಿದರು.