ಒಂದು ವೇಳೆ ಮುಸಲ್ಮಾನರಿಗೆ ಕುಮಾರಸ್ವಾಮಿಯ ಮೇಲೆ ಪ್ರೀತಿ ಇದ್ದಿದ್ದರೆ, ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋಲುತ್ತಿರಲಿಲ್ಲ ಎಂದು ಯತ್ನಾಳ್ ಹೇಳಿದರು. ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸ್ವಾಗತಿಸಿದ ಅವರು ವಿಜಯದಶಮಿಯ ಬಳಿಕ ಒಂದು ಶುಭ ಘಳಿಗೆಯಲ್ಲಿ ಸೀಟು ಹೊಂದಾಣಿಕೆಗೆ ಸಂಬಂಧಿಸಿದಂತೆ ಮಾತುಕತೆ ನಡೆಯಲಿದೆ ಎಂದು ಹೇಳಿದರು.