‘ಗ್ಯಾರಂಟಿ’ಗೇ ಇಲ್ಲ ಗ್ಯಾರಂಟಿ!

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಮಾಗಡಿ ಶಾಸಕ ಬಾಲಕೃಷ್ಣ ಇದೇ ರೀತಿಯ ಹೇಳಿಕೆ ನೀಡಿದ್ದು ವಿವಾದಕ್ಕೀಡಾಗಿತ್ತು. ಇದೀಗ ಪ್ರದೀಪ್ ಈಶ್ವರ್ ಸರದಿ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಕ್ಕಂದಿರೇ, ನೀವು ಬಿಜೆಪಿಗೆ ಏನಾದರೂ ಓಟ್ ಹಾಕಿದರೆ ಅವರು ಗ್ಯಾರಂಟಿ ನಿಲ್ಲಿಸಿಬಿಡುತ್ತಾರೆ ಎಂದು ಈಶ್ವರ್ ಹೇಳಿದ್ದಾರೆ.