ಅಗಲಿರುವ ಲೀಲಾವತಿಯವರ ಹೆಸರು ಶಾಶ್ವತವಾಗಿಸುವ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಕೆಲಸಗಳನ್ನು ತಮ್ಮ ಸರ್ಕಾರ ಮಾಡುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಅವರ ಹೆಸರಿನಲ್ಲಿ ಸ್ಮಾರಕವೊಂದನ್ನು ನಿರ್ಮಿಸುವ ಬಗ್ಗೆಯೂ ತಮ್ಮ ಸರ್ಕಾರ ಚಿಂತನೆ ನಡೆಸಲಿದೆ ಎಂದು ಹೇಳಿದ ಅವರು ಯಾವುದನ್ನೂ ಅವಸರಲ್ಲಿ ಹೇಳಲಾಗದು, ಹೇಳಿದ್ದನ್ನು ಮಾಡಿ ತೋರಿಸುವ ಸರ್ಕಾರ ನಮ್ಮದು ಎಂದರು.