ದರ್ಶನ್ ಸಲುವಾಗಿ ಜೈಲು ಅಧಿಕಾರಿಗಳ ಕರ್ತವ್ಯ ಲೋಪ; ಗೃಹ ಸಚಿವರಿಗೆ ಪ್ರಶ್ನೆಗಳ ಸುರಿಮಳೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ಗೆ ವಿಐಪಿ ಟ್ರೀಟ್​ಮೆಂಟ್​ ನೀಡಲಾಗಿದೆ. ಸಿಗರೇಟ್​, ಮೊಬೈಲ್, ರೌಡಿಗಳ ಸಂಪರ್ಕ ಸೇರಿದಂತೆ ಹಲವು ಅಕ್ರಮಗಳು ಜೈಲಿನಲ್ಲಿ ನಡೆದಿವೆ. ರೌಡಿಶೀಟರ್​ಗಳ ಜೊತೆ ದರ್ಶನ್ ಸಿಗರೇಟು ಸೇದಿದ್ದು, ವಿಡಿಯೋ ಕಾಲ್​ ಮಾಡಿದ್ದು ಬಹಿರಂಗ ಆದ ಬಳಿಕ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಒಟ್ಟಾರೆ ಪ್ರಕರಣದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.