ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದೀಗ ಸಿಎಂ ಸಿದ್ದರಾಮಯ್ಯ ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲು ತಯಾರಿ ನಡೆಸಿದ್ದು, ಈ ವಿಚಾರವಾಗಿ ವಕೀಲ ರಂಗನಾಥ್ ರೆಡ್ಡಿ ಮಾತನಾಡಿದ್ದಾರೆ.