ಕಳೆದ 3-4 ದಿನಗಳಿಂದ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ ನಿನ್ನೆ ಕಲಬುರಗಿ, ಬೀದರ್, ಯಾದಗಿರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಜೋಳ ಪ್ರಮುಖ ಬೆಳೆಯಾಗಿರುವುದರಿಂದ ಮಳೆ ಬೆಳೆಗೆ ಅನುಕೂಲಕರ ಅಂತ ಹೇಳಲಾಗುತ್ತಿದೆ.