ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಪ್ರಾಮಾಣಿಕತೆಯಿಂದ ಕೆಲಸ ಮಾಡಿ, ಬಡವರ, ಶೋಷಿತರ ಪರ ನಿಂತರೆ ಆಧುನಿಕ ಭಾರತದ ಕನಸು ಕಂಡಿದ್ದ ನೆಹರೂ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಇನ್ನು ಮುಂದೆ ತಿಂಗಳಲ್ಲಿ ಒಂದು ದಿನವನ್ನು ತಾವು ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಕಳೆಯುವುದಾಗಿ ಅವರು ಹೇಳಿದರು.