ದುರಾದೃಷ್ಟ, ಕೆಟ್ಟ ಸಮಯ ಕಾಡಲಾರಂಭಿಸಿದರೆ ಹಲವಾರು ವಿಧಗಳಲ್ಲಿ ಮತ್ತು ಎಡೆಬಿಡದೆ ಕಾಡುತ್ತದೆ ಅಂತ ಹೇಳುತ್ತಾರೆ. ತೆಲಂಗಾಣದ ಪ್ರಪ್ರಥಮ ಮುಖ್ಯಮಂತ್ರಿಯೆಂಬ ಹೆಗ್ಗಳಿಕೆಯೊಂದಿಗೆ ಎರಡು ಅವಧಿಗಳಿಗೆ ರಾಜ್ಯವಾಳಿದ ಕೆ ಚಂದ್ರಶೇಖರ್ ರಾವ್ ಸೋಲಿನ ಆಘಾತದಿಂದ ಚೇತರಿಸಿಕೊಳ್ಳುವ ಮೊದಲೇ ಬಚ್ಚಲು ಮನೆಯಲ್ಲಿ ಬಿದ್ದು ಸೊಂಟದ ಮೂಳೆ ಮುರಿದುಕೊಂಡಿದ್ದಾರೆ.