ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಅಪಘಾತಕ್ಕೀಡಾದ ಯುವಕ ಜಗದೀಶ್ ಸಜ್ಜನರ್ ಅವರ ಕುಟುಂಬಸ್ಥರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚಿಕಿತ್ಸೆಗೆ ಸಹಾಯ ಕೋರಿದರು. ಕುಮಾರಸ್ವಾಮಿಯವರು ಬೆಂಗಳೂರಿಗೆ ಬರಲು ಕುಟುಂಬಕ್ಕೆ ಸಲಹೆ ನೀಡಿ, ತಮ್ಮಿಂದಾದಷ್ಟು ವೈಯಕ್ತಿಕ ಸಹಾಯ ಮಾಡುವುದಾಗಿ ಭರವಸೆ ನೀಡಿದರು.