ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಅಪಘಾತಕ್ಕೀಡಾದ ಯುವಕ ಜಗದೀಶ್ ಸಜ್ಜನರ್ ಅವರ ಕುಟುಂಬಸ್ಥರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚಿಕಿತ್ಸೆಗೆ ಸಹಾಯ ಕೋರಿದರು. ಕುಮಾರಸ್ವಾಮಿಯವರು ಬೆಂಗಳೂರಿಗೆ ಬರಲು ಕುಟುಂಬಕ್ಕೆ ಸಲಹೆ ನೀಡಿ, ತಮ್ಮಿಂದಾದಷ್ಟು ವೈಯಕ್ತಿಕ ಸಹಾಯ ಮಾಡುವುದಾಗಿ ಭರವಸೆ ನೀಡಿದರು.